ಬುಧವಾರ, ಮಾರ್ಚ್ 22, 2023

ಯುಗಾದಿ

ಯುಗಾದಿ ಬಂತು

ಬಂತವ್ವ ಬಂತು ವರುಷದ ಬುನಾದಿ
ಉತ್ಸಾಹದೀ ಕುಣಿವ ಈ ಯುಗಾದಿ
ಹೊಸ ವರುಷಕೆ ಹೊಸದಾದ ತೇದಿ
ಪಂಚಾಂಗ ಶ್ರವಣಕೆ ಇದುವೇ ಹಾದಿ

ಬೇವಿನ ಗಿಡದಾಗ ಚಿಗುಟವ್ವ ಹೂವು
ಬೆಲ್ಲಾವ ಬೆರೆಸಿ ಹಂಚೋಣ ನಾವು
ತೋರಣ ಕಟ್ಟೋಣ ತಾರವ್ವ ಬೇವು
ಚಿತ್ರಾನ್ನ ತಿನ್ನೋಣ ತುರಿಯೇ ಮಾವು

ಹೆಣ್ಣಿನ ಮೊಗದಾಗ ಹರುಷಾದ ಹೊನಲು
ಕಾತರದಿ ಕಾದಾರ ಹೊಸ ವಸ್ತ್ರವ ತೊಡಲು
ತೋಟದಾ ತುಂಬಾ ಚಿಗುರಾವೆ ಫಸಲು
ತಾರವ್ವ ಬುಟ್ಟಿ ತಿಂದಾವು ಗಿಳಿ ಮತ್ತ ಅಳಿಲು

ಊರ ತುಂಬೆಲ್ಲಾ ಬೇವಿನಾ ಒಗರು
ಸುತ್ತ ನೋಡತ್ತ ಮಾವಿನಾ ಚಿಗುರು
ಅವ್ವ ಮಾಡ್ಯಾಳ ಹೋಳಿಗೆ, ಸಾರು
ಕೈ ಕಾಲ ತೊಳೆದು ಚಪ್ಪರಿಸಿ ಹೀರು.

ಗಿಡವೆಲ್ಲಾ ಬಸಿರು ಊರೆಲ್ಲಾ ಹಸಿರು
ಎಳೆಯೋ ತೇರು ಬಿಡದೇ ಉಸಿರು
ಗುಡಿ ಗೋಪುರಕೆ ಭವ್ಯ ಶೃಂಗಾರ
ಮಾಡುತ್ತಾ ಸಾಗೋಣ ನಮಸ್ಕಾರ.

ರಚನೆ : ಡಾ. ಪ್ರಭಾಕರ ಬೆಲವಾಡಿ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಆಧನಿಕ ರೈತ

ಆಧನಿಕ ರೈತ ರೈತರ ಬಗ್ಗೆ ಗೊತ್ತೇ ನಿಮಗೆ ರೈತರು ಇಹರು ಎರಡು ಬಗೆ ಅನ್ನವ ನೀಡುವ ಅನ್ನದಾತ ಕನ್ನವ ಹಾಕುವ ಕನ್ನದಾತ ಉಳುವಾ ರೈತನ ನೋಡಲ್ಲಿ ರೈತನ ನೇಗಿಲು ನೇತಲ್ಲಿ ...