ಆಧನಿಕ ರೈತ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ಅನ್ನವ ನೀಡುವ ಅನ್ನದಾತ
ಕನ್ನವ ಹಾಕುವ ಕನ್ನದಾತ
ಉಳುವಾ ರೈತನ ನೋಡಲ್ಲಿ
ರೈತನ ನೇಗಿಲು ನೇತಲ್ಲಿ
ಟ್ರ್ಯಾಕ್ಟರ್ ಹರಿಸಿದ ಹೊಲದಲ್ಲಿ
ಆಧುನಿಕತೆಯ ದಿನದಲ್ಲಿ
ಎತ್ತು, ಏತ ನೆನಪಿನಲಿ
ನೀರು ಹರಿಯಲು ಪಂಪಿನಲಿ
ಬೀಜವ ಬಿತ್ತುವ ಕೈಯೆಲ್ಲಿ
ಬೆವರನು ಸುರಿಸುವ ಮೈಯೆಲ್ಲಿ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ಗೊಬ್ಬರ ಹರಡಿತು ಯಂತ್ರವದು
ಅಗೋ ಔಷದಿ ಚಿಮ್ಮಿತು ತಂತ್ರವದು
ಹನಿ ನೀರಾವರಿ ಇಂದಿನ ನೀತಿ
ನೀರನು ಉಳಿಸುವ ನೂತನ ರೀತಿ
ಕಟಾವು ಮಾಡಲು ಜನ ಬೇಕಿಲ್ಲ
ಫಸಲು ಬರದಿರೆ ವಿಮೆ ಇದೆಯಲ್ಲ
ಪತ್ನಿಯು ತರುವಳು ಅನ್ನದ ಬುತ್ತಿ
ಬುಟ್ಟಿಯ ಹೊತ್ತಿ ಸಿಂಬಿಯ ಸುತ್ತಿ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ಭೂಮಿಯಿಲ್ಲದ ರೈತರು ಉಂಟು
ಇವರಿಗೂ ಬೇಕು ಪುಕ್ಕಟೆ ಕರೆಂಟು
ಸಾಲ ಕಟ್ಟದೇ ಬ್ಯಾಂಕಿಗೆ ಖೋತ
ಸಾಲ ಮನ್ನಾ ಇವರ ನಿತ್ಯದ ಗಾಥ
ಅನ್ನವಿಲ್ಲದೆ ಸತ್ತ ಅನ್ನದಾತ
ಚಿನ್ನವನೇ ಬಿತ್ತ ಕನ್ನದಾತ
ಕಾಯವ ತೊರೆದ ಕಾಯಕಯೋಗಿ
ಮಣ್ಣನೆ ಕದಿಯೇ ನಾಯಕಭೋಗಿ
ಮಣ್ಣಿನ ಮಕ್ಕಳು ಇವರಂತೆ
ನುಣ್ಣನೆ ಬೋಳಿಸೋ ಕುಳವಂತೆ
ಬಿದ್ದರೂ ಮೀಸೆ ಮಣ್ಣಾಗದಂತೆ
ನುಣುಚಿಕೊಳ್ಳುವ ಗುಣವಂತೆ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ರೈತಗೆ ತೋರಿಸಿ ಧರಣಿಯ ಹಾದಿ
ಕೆಲವರು ಪಡೆದರು ಸೌಧದ ಗಾದಿ.
ರಚನೆ : ಡಾ. ಪ್ರಭಾಕರ ಬೆಲವಾಡಿ
ಗುರುವಾರ, ಮಾರ್ಚ್ 23, 2023
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಆಧನಿಕ ರೈತ
ಆಧನಿಕ ರೈತ ರೈತರ ಬಗ್ಗೆ ಗೊತ್ತೇ ನಿಮಗೆ ರೈತರು ಇಹರು ಎರಡು ಬಗೆ ಅನ್ನವ ನೀಡುವ ಅನ್ನದಾತ ಕನ್ನವ ಹಾಕುವ ಕನ್ನದಾತ ಉಳುವಾ ರೈತನ ನೋಡಲ್ಲಿ ರೈತನ ನೇಗಿಲು ನೇತಲ್ಲಿ ...
-
ಪ್ರೀತಿಯ ಪತಿದೇವ ಕಳಿಸೋ ನನ್ ತವರೀಗೆ (ಜಾನಪದ ಗೀತೆ ರಚಿಸುವ ಪ್ರಥಮ ಪ್ರಯತ್ನ) ಸತಿ: ಪ್ರೀತಿಯ ಪತಿದೇವ ಕಳಿಸೋ ನನ್ ತವರೀಗೆ ಪ್ರೀತಿಯ ಪತಿದೇವ ಕಳಿಸೋ ನನ್ ತವರೀಗೆ ...
-
ಶ್ರೀ ಕೃಷ್ಣನ ತುಲಾಭಾರ – ನೂತನ ಅವಿಷ್ಕಾರ ಅಂದು ಹುಣ್ಣಿಮೆ. ಬೆಳ್ಳನ ಬೆಳದಿಂಗಳಲ್ಲಿ ದ್ವಾರಕೆಯ ಅರಮನೆಯ ಅಂಗಳದಲ್ಲಿ ರುಕ್ಮಿಣಿ, ಸತ್ಯಭಾಮ ಮತ್ತು ಜಾಂಬುವತಿ ಪಗಡೆ ಆಡು...
-
ಏಕಮ್ ಏಕಮ್ ಕರುಣಾಕಾರಂ “ಶಿವಾಯ ವಿಷ್ಣು ರೂಪಾಯ, ಶಿವರೂಪಾಯ ವಿಷ್ಣವೇ, ಶಿವಸ್ಯ ಹೃದಯಂ ವಿಷ್ಣುಃ, ವಿಷ್ನೋಷ್ಚ ಹೃದಯಂ ಶಿವಃ.” ಇರುವನಕ ಶಿವನದೇ ವಾದ, ಇಲ್ಲವಾದ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ