ಆಧನಿಕ ರೈತ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ಅನ್ನವ ನೀಡುವ ಅನ್ನದಾತ
ಕನ್ನವ ಹಾಕುವ ಕನ್ನದಾತ
ಉಳುವಾ ರೈತನ ನೋಡಲ್ಲಿ
ರೈತನ ನೇಗಿಲು ನೇತಲ್ಲಿ
ಟ್ರ್ಯಾಕ್ಟರ್ ಹರಿಸಿದ ಹೊಲದಲ್ಲಿ
ಆಧುನಿಕತೆಯ ದಿನದಲ್ಲಿ
ಎತ್ತು, ಏತ ನೆನಪಿನಲಿ
ನೀರು ಹರಿಯಲು ಪಂಪಿನಲಿ
ಬೀಜವ ಬಿತ್ತುವ ಕೈಯೆಲ್ಲಿ
ಬೆವರನು ಸುರಿಸುವ ಮೈಯೆಲ್ಲಿ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ಗೊಬ್ಬರ ಹರಡಿತು ಯಂತ್ರವದು
ಅಗೋ ಔಷದಿ ಚಿಮ್ಮಿತು ತಂತ್ರವದು
ಹನಿ ನೀರಾವರಿ ಇಂದಿನ ನೀತಿ
ನೀರನು ಉಳಿಸುವ ನೂತನ ರೀತಿ
ಕಟಾವು ಮಾಡಲು ಜನ ಬೇಕಿಲ್ಲ
ಫಸಲು ಬರದಿರೆ ವಿಮೆ ಇದೆಯಲ್ಲ
ಪತ್ನಿಯು ತರುವಳು ಅನ್ನದ ಬುತ್ತಿ
ಬುಟ್ಟಿಯ ಹೊತ್ತಿ ಸಿಂಬಿಯ ಸುತ್ತಿ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ಭೂಮಿಯಿಲ್ಲದ ರೈತರು ಉಂಟು
ಇವರಿಗೂ ಬೇಕು ಪುಕ್ಕಟೆ ಕರೆಂಟು
ಸಾಲ ಕಟ್ಟದೇ ಬ್ಯಾಂಕಿಗೆ ಖೋತ
ಸಾಲ ಮನ್ನಾ ಇವರ ನಿತ್ಯದ ಗಾಥ
ಅನ್ನವಿಲ್ಲದೆ ಸತ್ತ ಅನ್ನದಾತ
ಚಿನ್ನವನೇ ಬಿತ್ತ ಕನ್ನದಾತ
ಕಾಯವ ತೊರೆದ ಕಾಯಕಯೋಗಿ
ಮಣ್ಣನೆ ಕದಿಯೇ ನಾಯಕಭೋಗಿ
ಮಣ್ಣಿನ ಮಕ್ಕಳು ಇವರಂತೆ
ನುಣ್ಣನೆ ಬೋಳಿಸೋ ಕುಳವಂತೆ
ಬಿದ್ದರೂ ಮೀಸೆ ಮಣ್ಣಾಗದಂತೆ
ನುಣುಚಿಕೊಳ್ಳುವ ಗುಣವಂತೆ
ರೈತರ ಬಗ್ಗೆ ಗೊತ್ತೇ ನಿಮಗೆ
ರೈತರು ಇಹರು ಎರಡು ಬಗೆ
ರೈತಗೆ ತೋರಿಸಿ ಧರಣಿಯ ಹಾದಿ
ಕೆಲವರು ಪಡೆದರು ಸೌಧದ ಗಾದಿ.
ರಚನೆ : ಡಾ. ಪ್ರಭಾಕರ ಬೆಲವಾಡಿ
ಕನ್ನಡ : ಕವನ : ರೈತ : ಅನ್ನದಾತ : ಕನ್ನ ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಕನ್ನಡ : ಕವನ : ರೈತ : ಅನ್ನದಾತ : ಕನ್ನ ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
ಊರ ಕನ್ನಿಕೆ ಊರ ಬಯಕೆ
ಊರ ಕನ್ನಿಕೆ ಊರ ಬಯಕೆ ಡಾ ಬೆಳವಾಡಿ ಪ್ರಭಾಕರ್ ಊರ ಕೆರಿಯ ದಂಡೆಯ ಬಂಡೆಯ ಮ್ಯಾಗೆ ರಟ್ಟೆಯನೆತ್ತಿ ಕನ್ಯೆ ಬಟ್ಟೆಯನೊಗೆದಿತ್ತು ಸೀರಿಯ ನೆರಿಗೆಯ ಮಿಂಚಿನ ...
-
ಬಿ. ಎಂ. ಶ್ರೀ. ಗೆ ಅರ್ಚನೆ ನವೋದಯದರಸನೆ, ನವ್ಯ ಸ್ಥಾಪಕನೆ ಕನ್ನಡದ ಕಣ್ವನೆಂಬಿರುದು ಪಡೆದವನೆ ಉಸಿರ ಕೊಸರಿರುವನಕ ಕನ್ನಡವನೆ ನೆಡುವಂತೆ, ನುಡಿವಂತೆಸಗಿದವನೆ ...
-
ಪ್ರೀತಿಯ ಪತಿದೇವ ಕಳಿಸೋ ನನ್ ತವರೀಗೆ (ಜಾನಪದ ಗೀತೆ ರಚಿಸುವ ಪ್ರಥಮ ಪ್ರಯತ್ನ) ಸತಿ: ಪ್ರೀತಿಯ ಪತಿದೇವ ಕಳಿಸೋ ನನ್ ತವರೀಗೆ ಪ್ರೀತಿಯ ಪತಿದೇವ ಕಳಿಸೋ ನನ್ ತವರೀಗೆ ...
-
ಮುಕ್ತಿಯ ನೀಡಮ್ಮ ಪಾಪದ ಕೊಳದಲ್ಲೀ ಶಾಪದ ಸುಳಿಯಲ್ಲೀ ಬೆಂದಿಹೆ ನಾನಮ್ಮ, ಬೆಂದಿಹೆ ನಾನಮ್ಮ ಪಾಪದ ಒಡಲಲ್ಲೇ, ಪಾಪಿಯ ಮಡಿಲಲ್ಲೇ ಬೆಳೆದಿಹೆ ನಾನಮ್ಮ,...